
ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಬೀಜಿಂಗ್ನಲ್ಲಿ 25ನೇ ಸುತ್ತಿನ ವಿಶೇಷ ಪ್ರತಿನಿಧಿಗಳ ಮಾತುಕತೆಯನ್ನು ನಡೆಸುತ್ತಿದ್ದಾರೆ.
2020ರ ಗಾಲ್ವಾನ್ ಕಣಿವೆ ಸಂಘರ್ಷದ ನಂತರ ಗಡಿ ಪ್ರದೇಶದಲ್ಲಿ ಶಾಂತಿ ಮತ್ತು ದ್ವಿಪಕ್ಷೀಯ ಬಾಂಧವ್ಯವನ್ನು ಸ್ಥಿರಗೊಳಿಸುವ ನಿಟ್ಟಿನಲ್ಲಿ ಈ ಉನ್ನತ ಮಟ್ಟದ ಸಭೆ ಮಹತ್ವ ಪಡೆದಿದೆ.
ಮಾತುಕತೆಗೂ ಮುನ್ನ ಅಜಿತ್ ದೋವಲ್ ಅವರು ಚೀನಾದ ಉಪಾಧ್ಯಕ್ಷ ಹಾನ್ ಝೆಂಗ್ ಅವರನ್ನು ಭೇಟಿಯಾಗಿ ಗಡಿ ಸ್ಥಿರತೆ ಮತ್ತು ದ್ವಿಪಕ್ಷೀಯ ಸಂಬಂಧಗಳ ಸುಧಾರಣೆ ಕುರಿತು ಚರ್ಚಿಸಿದ್ದಾರೆ.