
ಮಂಗಳೂರಿನ ಫಳ್ನೀರ್ನಲ್ಲಿರುವ ಬ್ಲಿಂಕಿಟ್ ಹಬ್ನಿಂದ ಆರ್ಡರ್ ಮಾಡಿದ್ದ ಮೊಟ್ಟೆಯೊಂದರಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಗ್ರಾಹಕರು ಸಚಿವ ಯು.ಟಿ. ಖಾದರ್ ಅವರಿಗೆ ದೂರು ನೀಡಿದ್ದಾರೆ.
ದೂರಿನ ಬೆನ್ನಲ್ಲೇ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ದಾಳಿ ನಡೆಸಿದ್ದು, ಅಲ್ಲಿ ದಾಸ್ತಾನು ಇರಿಸಿದ್ದ ಹಲವು ಮೊಟ್ಟೆಗಳು ಕೊಳೆತು ದುರ್ವಾಸನೆ ಬೀರುತ್ತಿರುವುದು ಪತ್ತೆಯಾಗಿದೆ.
ಅಧಿಕಾರಿಗಳು ಬ್ಲಿಂಕಿಟ್ ಮಳಿಗೆಯ ಸಂಗ್ರಹಣ ಕೋಣೆಯನ್ನು ತಾತ್ಕಾಲಿಕವಾಗಿ ಸೀಲ್ ಮಾಡಲು ನಿರ್ಧರಿಸಿದ್ದು, ಹಾಳಾದ ಮೊಟ್ಟೆಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಸಂಸ್ಥೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.