
ಗುವಾಹಟಿಯಲ್ಲಿ ಪತ್ನಿಯ ತಲೆಯನ್ನು ಫ್ರಿಡ್ಜ್ನಲ್ಲಿಟ್ಟಿದ್ದ ಆರೋಪಿ ರಾಮಾನುಜ್ ಗೋಸ್ವಾಮಿ ಆಸ್ಪತ್ರೆಯಿಂದ ಕರೆತರುವಾಗ ಪೊಲೀಸ್ ವಾಹನದಿಂದ ಹಾರಿ ಸಾವನ್ನಪ್ಪಿದ್ದಾನೆ.
ಸೋಮವಾರ ಮುಂಜಾನೆ ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮುಗಿಸಿ ಹಿಂದಿರುಗುವಾಗ ಆರೋಪಿ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ.
ಆಯತಪ್ಪಿ ಆಳವಾದ ಕಂದಕಕ್ಕೆ ಬಿದ್ದ ಪರಿಣಾಮ ತಲೆ ಹಾಗೂ ದೇಹಕ್ಕೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.