
ಜಮ್ಮು ಕಾಶ್ಮೀರದ ಸೋನಮಾರ್ಗ ಸಮೀಪದ ಝೋಜಿಲಾ ಪಾಸ್ ಬಳಿಯ ರಂಗಾ ಮೋಡ್ ಪ್ರದೇಶದಲ್ಲಿ ಸಂಭವಿಸಿದ ಭಾರಿ ಮೇಘಸ್ಫೋಟದಿಂದಾಗಿ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಮೇಘಸ್ಫೋಟದ ನಂತರ ಉಂಟಾದ ಭೂಕುಸಿತ ಮತ್ತು ಪ್ರವಾಹದಿಂದಾಗಿ ರಂಗಾ ಮೋಡ್ ಬಳಿ ಭಾರಿ ಪ್ರಮಾಣದ ಕೆಸರು ಮತ್ತು ಮಣ್ಣು ಸಂಗ್ರಹಗೊಂಡಿದ್ದು, ಲಡಾಖ್ ಮತ್ತು ಕಾಶ್ಮೀರವನ್ನು ಸಂಪರ್ಕಿಸುವ ಹೆದ್ದಾರಿ ಬಂದ್ ಆಗಿದೆ.
ರಸ್ತೆಯನ್ನು ತೆರವುಗೊಳಿಸಲು ಗಡಿ ರಸ್ತೆಗಳ ಸಂಸ್ಥೆಯ (BRO) ಸಿಬ್ಬಂದಿ ಮತ್ತು ಯಂತ್ರೋಪಕರಣಗಳನ್ನು ಸ್ಥಳಕ್ಕೆ ರವಾನಿಸಲಾಗಿದ್ದು, ನದಿ ತಟಗಳ ಬಳಿ ತೆರಳದಂತೆ ಸ್ಥಳೀಯ ಆಡಳಿತವು ಜನರಿಗೆ ಮುನ್ನೆಚ್ಚರಿಕೆ ನೀಡಿದೆ.