
ಪಶ್ಚಿಮ ಬಂಗಾಳದ ಮಾಜಿ ಉಪಸಭಾಪತಿ ಮತ್ತು ಐದು ಬಾರಿ ಶಾಸಕರಾಗಿದ್ದ ಆಶಿಶ್ ಬ್ಯಾನರ್ಜಿ ಅವರು ಭಾನುವಾರ ಬಿರ್ಭುಮ್ ಜಿಲ್ಲೆಯ ತೃಣಮೂಲ ಕಾಂಗ್ರೆಸ್ ಕಚೇರಿಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ ಇದು ಆತ್ಮಹತ್ಯೆ ಪ್ರಕರಣವಾಗಿದ್ದು, ತಾರಾಪೀಠ ರಾಂಪುರ್ಹತ್ ಅಭಿವೃದ್ಧಿ ಪ್ರಾಧಿಕಾರದ ಅಕ್ರಮಗಳಲ್ಲಿ ತಾವು ಭಾಗಿಯಾಗಿಲ್ಲ ಎಂದು ಬರೆದಿರುವ ಡೆತ್ ನೋಟ್ ಪತ್ತೆಯಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವಾರ್ಡ್ ಸಂಖ್ಯೆ 5ರ ಹಟ್ಟಲಪಾರದಲ್ಲಿ ವಾಸವಿದ್ದ ಬ್ಯಾನರ್ಜಿ ಅವರ ಸಾವಿನ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.