
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಆನವಟ್ಟಿಯಲ್ಲಿ 13 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ 67ಕ್ಕೂ ಹೆಚ್ಚು ಗ್ರಾಮಗಳ ಜನರ ಸಮಸ್ಯೆಗಳನ್ನು ಒಂದೇ ದಿನದಲ್ಲಿ ಆಲಿಸಿದ್ದಾರೆ.
ಸಭೆಯಲ್ಲಿ ನೀರಾವರಿ ಕಾಮಗಾರಿಗಳು, ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಗ್ರಂಥಾಲಯಗಳ ಸ್ಥಾಪನೆ ಸೇರಿದಂತೆ ಹಲವು ಮೂಲಸೌಕರ್ಯಗಳ ಕೊರತೆಗಳನ್ನು ಮುಖಂಡರು ಸಚಿವರ ಗಮನಕ್ಕೆ ತಂದರು.
ಸಚಿವರು ಪ್ರತಿ ಗ್ರಾಮ ಪಂಚಾಯಿತಿಗೆ ಕನಿಷ್ಠ 30 ನಿಮಿಷ ಸಮಯ ಮೀಸಲಿಟ್ಟು, ಬೆಳಗ್ಗೆಯಿಂದ ಸಂಜೆವರೆಗೆ ನಿರಂತರವಾಗಿ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲೇ ಅಧಿಕಾರಿಗಳಿಗೆ ಪರಿಹಾರಕ್ಕೆ ಸೂಚನೆ ನೀಡಿದರು.