ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದಾಗಿ ಸೋಮವಾರ ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದಾರೆ.
ಸಂಪುಟ ವಿಸ್ತರಣೆಯ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲು ಸಿಎಂ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮತ್ತು ಬಿಕೆ ಹರಿಪ್ರಸಾದ್ ಅವರು ದೆಹಲಿಯಲ್ಲಿ ವರಿಷ್ಠರೊಂದಿಗೆ ಚರ್ಚೆ ನಡೆಸಲಿದ್ದಾರೆ.
ಆಗಸ್ಟ್ 6 ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮೊದಲೇ ಸಂಪುಟ ಸರ್ಜರಿ ನಡೆಯಲಿದೆ ಎಂದು ಸಿಎಂ ತಿಳಿಸಿದ್ದಾರೆ.