
ಕಾವೇರಿ ನದಿ ನೀರು ಹಂಚಿಕೆ ಮತ್ತು ಮೇಕೆದಾಟು ಯೋಜನೆ ವಿವಾದದ ಕುರಿತು ಕರ್ನಾಟಕದ ನಾಯಕರೊಂದಿಗೆ ಮಾತುಕತೆ ನಡೆಸಲು ಸಿದ್ಧ ಎಂದು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಆಗಸ್ಟ್ 3 ರಂದು ನಿಗದಿಯಾಗಿದ್ದ ಮಾತುಕತೆ ನಡೆಯದಿದ್ದರೂ, 1969ರಿಂದಲೂ ಕಾನೂನು ಹೋರಾಟ ಮತ್ತು ಮಾತುಕತೆ ಎರಡನ್ನೂ ತಮಿಳುನಾಡು ಸರ್ಕಾರ ಸಮಾನವಾಗಿ ಪರಿಗಣಿಸುತ್ತಿದೆ ಎಂದು ವಿಜಯ್ ತಿಳಿಸಿದ್ದಾರೆ.
ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಮೇಕೆದಾಟು ವಿಚಾರದಲ್ಲಿ ಸರ್ವಪಕ್ಷ ಸಭೆ ಕರೆಯಲು ಆಗ್ರಹಿಸಿದ್ದು, ಸಚಿವ ಆದವ್ ಅರ್ಜುನ್ ಹಿಂದಿನ ಡಿಎಂಕೆ ಸರ್ಕಾರದ ಅವಧಿಯಲ್ಲಿ ಸುಪ್ರೀಂಕೋರ್ಟ್ನಲ್ಲಿ ಅರ್ಜಿಗಳು ಹಿನ್ನಡೆ ಅನುಭವಿಸಿವೆ ಎಂದು ಆರೋಪಿಸಿದ್ದಾರೆ.