
ಸಾಮಾಜಿಕ ಪ್ರಜಾಸತ್ತೆಯ ಅಡಿಪಾಯವಿಲ್ಲದೆ ರಾಜಕೀಯ ಪ್ರಜಾಸತ್ತೆ ನೆಲೆ ನಿಲ್ಲಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರಿನಲ್ಲಿ ತಿಳಿಸಿದ್ದಾರೆ.
ದೇಶದ ಜನಸಂಖ್ಯೆಯಲ್ಲಿ ಶೇ. 65ರಷ್ಟು ಯುವಕರಿದ್ದು, ಯುವ ಸಂಸತ್ ಕಾರ್ಯಕ್ರಮಗಳ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಯುವ ಜನತೆಗೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದಿದ್ದಾರೆ.
ಐದು ಸಾವಿರ ವರ್ಷಗಳಿಂದ ತುಳಿತಕ್ಕೆ ಒಳಗಾಗಿದ್ದ ಜನರನ್ನು ಮೇಲೆತ್ತುವ ಉದ್ದೇಶದಿಂದಲೇ ಡಾ. ಬಿ.ಆರ್. ಅಂಬೇಡ್ಕರ್ ಅವರು ಮೀಸಲಾತಿ ವ್ಯವಸ್ಥೆಯನ್ನು ತಂದಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.