
ಸಿಂಗಟಾಲೂರ ಏತ ನೀರಾವರಿ ಯೋಜನೆಗಾಗಿ ಭೂಮಿ ನೀಡಿ ಎರಡು ದಶಕ ಕಳೆದರೂ ಪರಿಹಾರ ಸಿಗದ ಹಿನ್ನೆಲೆಯಲ್ಲಿ, ಗದಗ ಜಿಲ್ಲಾ ನ್ಯಾಯಾಲಯದ ಆದೇಶದಂತೆ ರೈತರು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರ ಕಾರನ್ನು ಜಪ್ತಿ ಮಾಡಿದ್ದಾರೆ.
ಸುಮಾರು 350ಕ್ಕೂ ಹೆಚ್ಚು ಎಕರೆ ಭೂಮಿ ನೀಡಿದ ರೈತರಿಗೆ ಪ್ರತಿ ಎಕರೆಗೆ 40 ಲಕ್ಷ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದ್ದರೂ, ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ವಕೀಲರು ತಿಳಿಸಿದ್ದಾರೆ.
ಪರಿಹಾರಕ್ಕಾಗಿ ದಶಕಗಳಿಂದ ಹೋರಾಟ ನಡೆಸುತ್ತಿರುವ ಮುಂಡರಗಿ ತಾಲೂಕಿನ ಬೀಡನಾಳ, ಮೇವುಂಡಿ, ಕೊರ್ಲಹಳ್ಳಿ ಮತ್ತು ಯಕ್ಲಾಪೂರ ಗ್ರಾಮಗಳ ರೈತರು ಸರ್ಕಾರದ ವಿಳಂಬ ಧೋರಣೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.