
ಕಾವೇರಿ ನೀರು ಹಂಚಿಕೆ ವಿವಾದದ ಹಿನ್ನೆಲೆಯಲ್ಲಿ ಆಗಸ್ಟ್ 10ರ ಸೋಮವಾರ ಅತ್ತಿಬೆಲೆ ಗಡಿಯಲ್ಲಿ ತಮಿಳುನಾಡು ವಾಹನಗಳ ಸಂಚಾರ ತಡೆಯಲು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.
ಸೋಮವಾರ ಬೆಳಿಗ್ಗೆ 11 ಗಂಟೆಗೆ ಅಂತರರಾಜ್ಯ ಗಡಿಯನ್ನು ಮುಚ್ಚಲಾಗುವುದು ಎಂದು ತಿಳಿಸಿರುವ ಅವರು, ಈ ಬಂದ್ ಬೆಂಬಲಕ್ಕೆ 2,000ಕ್ಕೂ ಹೆಚ್ಚು ಸಂಘಟನೆಗಳು ಕೈಜೋಡಿಸಿವೆ ಎಂದು ಹೇಳಿದ್ದಾರೆ.
ಮೇಕೆದಾಟು, ಮಹದಾಯಿ ಮತ್ತು ಕಳಸಾ ಬಂಡೂರಿ ಯೋಜನೆಗಳ ಜಾರಿಗೆ ಆಗ್ರಹಿಸಿ ಆಗಸ್ಟ್ 13ರಂದು ರಾಜ್ಯಾದ್ಯಂತ ಬಂದ್ ನಡೆಸಲು ವಿವಿಧ ಸಂಘಟನೆಗಳು ನಿರ್ಧರಿಸಿವೆ.