
ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷರು ಮತ್ತು ಹಾಲಿ ಸದಸ್ಯರ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಜಯಮಹಲ್ ರಸ್ತೆಯಲ್ಲಿರುವ 2016ನೇ ಬ್ಯಾಚ್ನ ಐಎಎಸ್ ಅಧಿಕಾರಿ ಜ್ಞಾನೇಂದ್ರಕುಮಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿ, ಲಾಕ್ ಮುರಿದು ದಾಖಲೆಗಳನ್ನು ಪರಿಶೀಲಿಸಲಾಗಿದೆ.
ಹಗರಣದ ತನಿಖೆಯ ಭಾಗವಾಗಿ ರಾಜ್ಯದ 8 ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದ್ದು, ಅಧಿಕಾರಿಗಳು ಮಹತ್ವದ ದಾಖಲೆಗಳಿಗಾಗಿ ಶೋಧ ನಡೆಸುತ್ತಿದ್ದಾರೆ.