
ಬೆಂಗಳೂರಿನ ಗಾಂಧಿ ಭವನದಲ್ಲಿ ಶೂದ್ರ ಸೇವಾ ಸಂಘ ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ವಿದ್ಯಾವಂತರು ಈಗಲೂ ಮೌಢ್ಯ ಮತ್ತು ಜಾತಿ ವ್ಯವಸ್ಥೆಯನ್ನು ಪಾಲಿಸುತ್ತಿರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸಮಾನತೆಯ ಸಮಾಜ ನಿರ್ಮಾಣಕ್ಕೆ ವೈಜ್ಞಾನಿಕ ಮತ್ತು ವೈಚಾರಿಕ ಚಿಂತನೆ ಅಗತ್ಯವಿದ್ದು, ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ಆಶಯದಂತೆ ಅಸಮಾನತೆ ತೊಲಗಬೇಕೆಂದು ಅವರು ಕರೆ ನೀಡಿದ್ದಾರೆ.
ತಮ್ಮ ಸರ್ಕಾರ ಜಾರಿಗೆ ತಂದ ಮೌಢ್ಯ ಪ್ರತಿಬಂಧಕ ಕಾಯಿದೆ ಸಮರ್ಪಕವಾಗಿ ಜಾರಿಯಾಗದಿರುವುದಕ್ಕೆ ವಿದ್ಯಾವಂತರ ಮನಸ್ಥಿತಿಯೇ ಕಾರಣ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.