
ಕರ್ನಾಟಕದಲ್ಲಿ ಮುಂಗಾರು ಮಳೆ ದುರ್ಬಲವಾಗಿರುವುದರಿಂದ ಮುಂದಿನ ಒಂದು ವಾರ ರಾಜ್ಯದ ಹಲವು ಭಾಗಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 1-3 ಡಿಗ್ರಿ ಸೆಲ್ಶಿಯಸ್ ಹೆಚ್ಚಾಗಲಿದೆ ಎಂದು ಐಎಂಡಿ ತಿಳಿಸಿದೆ.
ಬೆಂಗಳೂರಿನಲ್ಲಿ ಸಾಮಾನ್ಯಕ್ಕಿಂತ 4 ಡಿಗ್ರಿ ಹೆಚ್ಚಾಗಿ 32-33 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗುತ್ತಿದ್ದು, ಕಲಬುರಗಿಯಲ್ಲಿ 36 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ದಾಖಲಾಗಿದೆ.
ರಾಜ್ಯದಲ್ಲಿ ಈ ವರ್ಷ ಶೇ 26ರಷ್ಟು ಮಳೆ ಕೊರತೆಯಾಗಿದ್ದು, ಸೆಪ್ಟೆಂಬರ್ 16ರ ನಂತರ ಮಳೆ ಚಟುವಟಿಕೆ ಸುಧಾರಿಸುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಸಿ.ಎಸ್. ಪಾಟೀಲ್ ಹೇಳಿದ್ದಾರೆ.