
2029ರ ಲೋಕಸಭಾ ಚುನಾವಣೆಗೆ ಮುನ್ನ ಎನ್ಡಿಎ ಮೈತ್ರಿಕೂಟ ಅಧಿಕಾರದಲ್ಲಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಹಂತ-ಹಂತವಾಗಿ ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂಬೈನಲ್ಲಿ ಘೋಷಿಸಿದ್ದಾರೆ.
ಉತ್ತರಾಖಂಡ ಮಾದರಿಯನ್ನು ಅನುಸರಿಸಿ ಧರ್ಮ ಹಾಗೂ ಜಾತಿ ಭೇದವಿಲ್ಲದೆ ಮದುವೆ, ವಿಚ್ಛೇದನ ಮತ್ತು ಉತ್ತರಾಧಿಕಾರದಂತಹ ನಾಗರಿಕ ವಿಷಯಗಳಿಗೆ ಒಂದೇ ಕಾನೂನು ಅನ್ವಯಿಸುವಂತೆ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.
ಮೋದಿ ಸರ್ಕಾರದ ಆಡಳಿತದಲ್ಲಿ ಭಾರತವು ವಿಶ್ವದ ಅಗ್ರ 5 ಆರ್ಥಿಕತೆಗಳಲ್ಲಿ ಒಂದಾಗಿದ್ದು, ಪ್ರಥಮ ತ್ರೈಮಾಸಿಕದಲ್ಲಿ ಶೇ. 7.8ರ ಜಿಡಿಪಿ ಬೆಳವಣಿಗೆ ದಾಖಲಿಸಿದೆ ಎಂದು ಅವರು ವಿವರಿಸಿದರು.