
ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಕಾಂಗ್ರೆಸ್ನಲ್ಲಿ ಭಿನ್ನಮತದ ಬಿರುಗಾಳಿ ಏಳಲಿದ್ದು, ಅಸಮಾಧಾನಿತ ಶಾಸಕರ ದೊಡ್ಡ ದಂಡೇ ಬಿಜೆಪಿ ಸೇರಲಿದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಗದಗದಲ್ಲಿ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಕೆ.ಎಸ್. ಈಶ್ವರಪ್ಪನವರಂತಹ ನಾಯಕರನ್ನು ಪಕ್ಷಕ್ಕೆ ಮರಳಿ ಕರೆತಂದರೆ ಬಿಜೆಪಿಯ ಬಲ ಹೆಚ್ಚಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದಲ್ಲಿ ಶೇಕಡಾ 40ರಷ್ಟು ಮಳೆ ಕೊರತೆಯಿಂದ ಬರಗಾಲ ಉಂಟಾಗಿದ್ದು, ಸಂಕಷ್ಟದಲ್ಲಿರುವ ರೈತರ ಸಾಲವನ್ನು ಸರ್ಕಾರ ಕೂಡಲೇ ಮನ್ನಾ ಮಾಡಬೇಕೆಂದು ಅವರು ಆಗ್ರಹಿಸಿದ್ದಾರೆ.