
ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸಿಎಂ ಡಿಕೆ ಶಿವಕುಮಾರ್ ಅಧಿಕೃತವಾಗಿ ಘೋಷಿಸಿದ್ದಾರೆ.
ದಶಕಗಳ ಹೋರಾಟದ ಫಲವಾಗಿ ತುಳು ಭಾಷೆಗೆ ಸ್ಥಾನಮಾನ ಸಿಕ್ಕಿರುವುದು ಕರಾವಳಿ ಭಾಗದಲ್ಲಿ ಹರ್ಷ ತಂದಿದ್ದು, ಸಾರ್ವಜನಿಕವಾಗಿ ಸಂಭ್ರಮಾಚರಣೆ ನಡೆದಿದೆ.
ಈ ಸಂಭ್ರಮಾಚರಣೆಯ ಭಾಗವಾಗಿ ಶಾಸಕ ಅಶೋಕ್ ರೈ ಅವರು ತುಳು ಧ್ವಜ ಹಿಡಿದು ಕುಣಿದು ಕುಪ್ಪಳಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.