ಕುಷ್ಟಗಿ ತಾಲೂಕಿನ ಶಿರಗುಂಪಿ ಮತ್ತು ಬಳೂಟಗಿ ಗ್ರಾಮಗಳ ಹಳ್ಳದಲ್ಲಿ ಜೆಸಿಬಿ ಬಳಸಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದರೂ ಅಧಿಕಾರಿಗಳು ಮೌನ ವಹಿಸಿದ್ದಾರೆ.
ಪರವಾನಗಿ ಇಲ್ಲದೆ ಟಿಪ್ಪರ್ಗಳಲ್ಲಿ ಮರಳು ಸಾಗಿಸುತ್ತಿರುವುದರಿಂದ ರಸ್ತೆಗಳು ಹಾಳಾಗುತ್ತಿದ್ದು, ಸರ್ಕಾರಿ ಬೊಕ್ಕಸಕ್ಕೆ ಲಕ್ಷಾಂತರ ರೂ. ನಷ್ಟ ಉಂಟಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ತಹಸೀಲ್ದಾರ್ ಗುರುರಾಜ ಚಲುವಾದಿ ಅವರು ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಮಾಹಿತಿ ಪಡೆದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದು, ವಿಎಒ ಮೌನೇಶ ಮಡಿವಾಳರ ರೈತರಿಗೆ ನೋಟಿಸ್ ನೀಡಲಾಗಿದೆ ಎಂದಿದ್ದಾರೆ.