
14 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಬೆಂಗಳೂರಿನ ಜಕ್ಕೂರು ರೈಲ್ವೆ ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಇನ್ನೊಂದು ತಿಂಗಳಲ್ಲಿ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆಯಿದೆ.
ಸುಮಾರು 15 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಈ ಯೋಜನೆಯ ಲೋಡ್ ಪರೀಕ್ಷೆ ಮತ್ತು ರಸ್ತೆ ಮಾರ್ಕಿಂಗ್ ಕೆಲಸಗಳು ಮಾತ್ರ ಬಾಕಿ ಉಳಿದಿವೆ.
ಈ ಮೇಲ್ಸೇತುವೆ ಪೂರ್ಣಗೊಂಡರೆ ಯಲಹಂಕ, ಹೆಬ್ಬಾಳ ಮತ್ತು ಹೆಗ್ಗಡೆ ನಗರ ಭಾಗದ ವಾಹನ ಸವಾರರಿಗೆ ಮೂರು ಕಿಲೋ ಮೀಟರ್ ದೂರ ಉಳಿತಾಯವಾಗಲಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.