
ಬೆಂಗಳೂರು ಗ್ರಾಮಾಂತರದ ಆದಿನಾರಾಯಣಹೊಸಹಳ್ಳಿಯಲ್ಲಿ 50 ಎಕರೆ ಜಮೀನಿನಲ್ಲಿ ಮೆಗಾ ಜ್ಯುವೆಲರಿ ಪಾರ್ಕ್ ಸ್ಥಾಪಿಸಲು ಜೆಡಿಎಸ್ ಶಾಸಕ ಟಿ.ಎ. ಶರವಣ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಯೋಜನೆ ಜಾರಿಯಾದರೆ ರಾಜ್ಯಕ್ಕೆ ಸಾವಿರಾರು ಕೋಟಿ ಜಿಎಸ್ಟಿ ಆದಾಯ ಬರುವುದಲ್ಲದೆ, 5 ಲಕ್ಷ ಉದ್ಯಮಿಗಳಿಗೆ ಮತ್ತು 10 ಸಾವಿರ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಸಿಗಲಿದೆ.
ಮನವಿಯನ್ನು ಸ್ವೀಕರಿಸಿದ ಸಿಎಂ, ದಕ್ಷಿಣ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಜ್ಯುವೆಲ್ಲರಿ ಪಾರ್ಕ್ ಸ್ಥಾಪಿಸುವುದಾಗಿ ಭರವಸೆ ನೀಡಿದ್ದಾರೆ.