
ಬೆಂಗಳೂರಿನ ಅಗ್ರಹಾರ ದಾಸರಹಳ್ಳಿಯಲ್ಲಿ ಪ್ರೇಮ ವಿವಾಹವಾಗಿದ್ದ 21 ವರ್ಷದ ಪೂಜಾ ಎಂಬ ಯುವತಿಯನ್ನು ಕುಟುಂಬದವರು ಸುಪಾರಿ ನೀಡಿ ಅಪಹರಿಸಲು ಯತ್ನಿಸಿದ್ದು, ಸ್ಥಳೀಯರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಪರಾರಿಯಾಗಲು ಯತ್ನಿಸಿದ ಚಾಲಕ ಸದ್ದಾಂ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ್ದರಿಂದ ಪೊಲೀಸ್ ವಾಹನ ಮತ್ತು ನ್ಯಾಯಾಧೀಶರ ಕಾರು ಸೇರಿದಂತೆ 35ಕ್ಕೂ ಹೆಚ್ಚು ಕಾರುಗಳು ಹಾಗೂ 100ಕ್ಕೂ ಹೆಚ್ಚು ಬೈಕ್ಗಳಿಗೆ ಡಿಕ್ಕಿ ಸಂಭವಿಸಿದೆ.
ಈ ಸರಣಿ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಜಯಲಕ್ಷ್ಮೀ ಎಂಬುವವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.