ಕರ್ನಾಟಕ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಅಂತಿಮ ಪಟ್ಟಿ ಸಿದ್ಧವಾಗುತ್ತಿದ್ದು, 20 ಸ್ಥಾನಗಳನ್ನು ಏಕಕಾಲಕ್ಕೆ ಭರ್ತಿ ಮಾಡುವ ಕುರಿತು ದೆಹಲಿಯಲ್ಲಿ ಎಐಸಿಸಿ ನಾಯಕರು ಚರ್ಚೆ ನಡೆಸುತ್ತಿದ್ದಾರೆ.
ಸಂಪುಟದಲ್ಲಿ ಶೇ 75 ರಷ್ಟು ಹೊಸಬರಿಗೆ ಅವಕಾಶ ನೀಡುವಂತೆ ಸಿಎಂ ಡಿಕೆ ಶಿವಕುಮಾರ್ ಪ್ರತಿಪಾದಿಸುತ್ತಿದ್ದರೆ, ಸಿದ್ದರಾಮಯ್ಯ ಬಣವು ಹಿರಿಯರಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಪಟ್ಟು ಹಿಡಿದಿದೆ.
ಸಚಿವ ಸ್ಥಾನದ ಆಕಾಂಕ್ಷಿಗಳ ಗದ್ದಲ ತಪ್ಪಿಸಲು 2 ರಿಂದ 3 ಸ್ಥಾನಗಳನ್ನು ಖಾಲಿ ಬಿಡುವ ಬಗ್ಗೆಯೂ ಚಿಂತನೆ ನಡೆದಿದ್ದು, ಗುರುವಾರ ಬೆಳಗ್ಗೆ ಅಂತಿಮ ಪಟ್ಟಿ ಹೊರಬೀಳುವ ಸಾಧ್ಯತೆಯಿದೆ.