
ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಸಿಬಿ ದಾಳಿ ವೇಳೆ ಮೊಬೈಲ್ ಫೋನ್ ಪತ್ತೆಯಾದ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಜೈಲಿನಲ್ಲಿ ಯಾವುದೇ ವಿವಿಐಪಿ ಟ್ರೀಟ್ಮೆಂಟ್ ನೀಡುತ್ತಿಲ್ಲವೆಂದು ಸ್ಪಷ್ಟಪಡಿಸಿದ ಸಚಿವರು, ವಶಪಡಿಸಿಕೊಂಡ ವಸ್ತುಗಳನ್ನು ಫೊರೆನ್ಸಿಕ್ ತನಿಖೆಗೆ ಒಳಪಡಿಸಲಾಗುವುದು ಎಂದು ಹೇಳಿದ್ದಾರೆ.
ವಿರೋಧ ಪಕ್ಷದವರು ಸದನದಲ್ಲಿ ಗದ್ದಲ ಎಬ್ಬಿಸುವ ಬದಲು ಪಿಎಂ ಕೇರ್ಸ್ ಫಂಡ್ ಮತ್ತು ರಾಮಮಂದಿರ ದೇಣಿಗೆ ಅಕ್ರಮದಂತಹ ಗಂಭೀರ ವಿಷಯಗಳ ಬಗ್ಗೆ ಚರ್ಚಿಸಲಿ ಎಂದು ಸಚಿವರು ಸವಾಲು ಹಾಕಿದ್ದಾರೆ.