
ಸಚಿವ ಸಂಪುಟ ಹಾಗೂ ಕೇಂದ್ರ ಸಚಿವರ ಭೇಟಿಗಾಗಿ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಇದೇ ಮೊದಲ ಬಾರಿಗೆ ವಿಶೇಷ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ.
ಬೆಂಗಳೂರಿನ ಭದ್ರತಾ ಮಾದರಿಯಲ್ಲೇ ದೆಹಲಿಯಲ್ಲಿಯೂ ವ್ಯವಸ್ಥೆ ಮಾಡಲಾಗಿದ್ದು, ಎಸ್ಪಿ ಮತ್ತು ಇನ್ಸ್ಪೆಕ್ಟರ್ ಸೇರಿದಂತೆ 7 ಮಂದಿ ಪೊಲೀಸರ ವಿಶೇಷ ತಂಡವು ಭದ್ರತೆಯ ಜವಾಬ್ದಾರಿಯನ್ನು ವಹಿಸಿಕೊಂಡಿದೆ.
ರಾಜ್ಯದ ಮುಖ್ಯಮಂತ್ರಿಯೊಬ್ಬರಿಗೆ ದೆಹಲಿಯಲ್ಲಿ ಇಷ್ಟೊಂದು ವಿಶೇಷ ಭದ್ರತಾ ವ್ಯವಸ್ಥೆಯನ್ನು ಒದಗಿಸಿರುವುದು ಇದೇ ಮೊದಲ ಬಾರಿಯಾಗಿದೆ ಎಂದು ವರದಿಯಾಗಿದೆ.