
ಕರ್ನಾಟಕದಾದ್ಯಂತ 598 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಪೊಲೀಸರು ಬರೋಬ್ಬರಿ 800 ಮಂದಿ ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ.
ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡಿರುವ ಖಚಿತ ಮಾಹಿತಿಯ ಆಧಾರದ ಮೇಲೆ 16,951 ಸ್ಥಳಗಳಲ್ಲಿ ಪೊಲೀಸರು ಶೋಧ ನಡೆಸಿದ್ದು, ಬೆಂಗಳೂರು ಒಂದರಲ್ಲೇ 503 ಮಕ್ಕಳನ್ನು ರಕ್ಷಿಸಲಾಗಿದೆ.
ರಕ್ಷಿಸಲಾದ ಮಕ್ಕಳನ್ನು ಮಂಗಳವಾರದಂದು ಚೈಲ್ಡ್ ವೆಲ್ಫೇರ್ ಕಮಿಟಿ (CWC) ಮುಂದೆ ಹಾಜರುಪಡಿಸಲಾಗುತ್ತಿದ್ದು, ಮಕ್ಕಳನ್ನು ಮಾರಾಟ ಮಾಡಿ ಕೆಲಸಕ್ಕೆ ಇಟ್ಟಿರುವುದು ಕಂಡುಬಂದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ.