
ಲಿಂಗಸುಗೂರಿನ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಲಿಕಾರ್ಥಿ ಸಹಾಯ ಕೇಂದ್ರದಲ್ಲಿ ಬಿ.ಇಡಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಶುಕ್ರವಾರ ನಡೆಯಿತು.
ವಕೀಲರ ಸಂಘದ ಅಧ್ಯಕ್ಷ ಭೂಪನಗೌಡ ಪಾಟೀಲ ಸಮಾರಂಭ ಉದ್ಘಾಟಿಸಿ, ಶಿಕ್ಷಕ ವೃತ್ತಿಯು ಸಮಾಜ ಮತ್ತು ರಾಷ್ಟ್ರ ನಿರ್ಮಾಣದ ಮಹತ್ತರ ಜವಾಬ್ದಾರಿಯಾಗಿದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಕಲಿಕಾರ್ಥಿ ಸಹಾಯ ಕೇಂದ್ರದ ಸಂಚಾಲಕ ನಾಗರಾಜ ಎಚ್.ಎನ್. ಸೇರಿದಂತೆ ಪತ್ರಕರ್ತರ ಸಂಘದ ಪ್ರಮುಖರು ಉಪಸ್ಥಿತರಿದ್ದರು.