
ಸರ್ಕಾರಿ ಶಾಲಾ ಶಿಕ್ಷಕರ ಮಾದರಿಯೇ ಖಾಸಗಿ ಶಾಲೆಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಅರ್ಹ ಬೋಧಕರಿಗೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ನೀಡುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಪ್ರಸ್ತಾವನೆಯನ್ನು ಪರಿಶೀಲಿಸಿ ಮುಂಬರುವ ದಿನಗಳಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಅಲ್ಲದೆ, ಬೆಂಗಳೂರಿನ ಟ್ರಾಫಿಕ್ ನಿಯಂತ್ರಣಕ್ಕಾಗಿ ಶಾಲೆಗಳ ವೇಳಾಪಟ್ಟಿ ಬದಲಾವಣೆ ಹಾಗೂ ಖಾಸಗಿ ಶಾಲೆಗಳ ಪ್ರಥಮ ಮಾನ್ಯತೆ ನಿಯಮಗಳ ಸರಳೀಕರಣದ ಕುರಿತು ಸಚಿವರು ಮಾತನಾಡಿದ್ದಾರೆ.