
ಹಾಸನದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಅವರು ಕಾಂಗ್ರೆಸ್ ಸಂಸದ ಶ್ರೇಯಸ್ ಪಟೇಲ್ ಅವರೊಂದಿಗೆ ಗುಟ್ಟಾಗಿ ಮಾತುಕತೆ ನಡೆಸಿದ್ದಾರೆ.
ಆಗಸ್ಟ್ 09 ರಂದು ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೇಯಸ್ ಪಟೇಲ್ ಅವರು ಪ್ರೀತಂಗೌಡರನ್ನು ಬಹಿರಂಗವಾಗಿ ಹಾಡಿ ಹೊಗಳಿದ್ದು ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
ಜೆಡಿಎಸ್-ಬಿಜೆಪಿ ಮೈತ್ರಿಯಿಂದ ಟಿಕೆಟ್ ಸಿಗದೇ ಇರುವ ಆತಂಕದಲ್ಲಿರುವ ಪ್ರೀತಂಗೌಡ ಅವರು ಕಾಂಗ್ರೆಸ್ ಸೇರಲಿದ್ದಾರೆಯೇ ಎಂಬ ಪ್ರಶ್ನೆಗಳು ಇದೀಗ ಸಾರ್ವಜನಿಕ ವಲಯದಲ್ಲಿ ಉದ್ಭವಿಸಿವೆ.