
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರದೋಷ್ ರಾವ್ ಮಾಫಿ ಸಾಕ್ಷಿಯಾಗಲು ವಿಚಾರಣಾ ನ್ಯಾಯಾಲಯ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ ದರ್ಶನ್ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಹೈಕೋರ್ಟ್ ಸೆಪ್ಟೆಂಬರ್ 7ಕ್ಕೆ ಮುಂದೂಡಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಸೆಪ್ಟೆಂಬರ್ 2ರಂದು ಆದೇಶ ಪ್ರಕಟಿಸುವ ನಿರೀಕ್ಷೆಯಿದ್ದರೂ, ಸಮಯದ ಅಭಾವದಿಂದಾಗಿ ದಿನಾಂಕವನ್ನು ಬದಲಾಯಿಸಲಾಗಿದೆ.
ಪ್ರಕರಣದ 14ನೇ ಆರೋಪಿಯಾಗಿರುವ ಪ್ರದೋಷ್ ರಾವ್, ಹತ್ಯೆಯ ಪ್ರತಿ ಹಂತದ ಮಾಹಿತಿ ತಿಳಿದಿರುವ ಹಿನ್ನೆಲೆಯಲ್ಲಿ ಅಪ್ರೂವರ್ ಆಗಲು ಮುಂದೆ ಬಂದಿದ್ದಾರೆ.