
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ14 ಆರೋಪಿ ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಲು ವಿಚಾರಣಾ ನ್ಯಾಯಾಲಯ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ ದರ್ಶನ್ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಸೆಪ್ಟೆಂಬರ್ 2ರಂದು ಪ್ರದೋಷ್ ಅವರ ವಿಚಾರಣೆ ನಿಗದಿಯಾಗಿರುವುದರಿಂದ, ತುರ್ತು ವಿಚಾರಣೆ ನಡೆಸಬೇಕೆಂಬ ಹಿರಿಯ ವಕೀಲ ಹಷ್ಮತ್ ಪಾಷಾ ಅವರ ಮನವಿಯನ್ನು ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಪೀಠ ಪುರಸ್ಕರಿಸಿದೆ.
ಇಂದೇ (ಸೆಪ್ಟೆಂಬರ್ 1) ಈ ಅರ್ಜಿಯ ವಿಚಾರಣೆ ನಡೆಸಲು ಹೈಕೋರ್ಟ್ ಸಮ್ಮತಿಸಿದ್ದು, ನ್ಯಾಯಾಲಯದ ತೀರ್ಪಿನ ಬಗ್ಗೆ ಭಾರಿ ಕುತೂಹಲ ಮೂಡಿದೆ.