
ಕೊರಟಗೆರೆಯ ಗೊರವನಹಳ್ಳಿಯಲ್ಲಿ ಮಹಾಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ಮತ್ತು ಆಕಾಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು.
ಶಿಬಿರದಲ್ಲಿ ಗೊರವನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳ 200ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದು, ತಪಾಸಣೆಯ ನಂತರ ಉಚಿತವಾಗಿ ಕನ್ನಡಕಗಳನ್ನು ವಿತರಿಸಲಾಯಿತು.
ಟ್ರಸ್ಟ್ ಅಧ್ಯಕ್ಷ ಬಿ.ಜಿ. ವಾಸುದೇವ ಸೇರಿದಂತೆ ಹಲವು ಪದಾಧಿಕಾರಿಗಳು ಶಿಬಿರದ ಯಶಸ್ಸಿಗೆ ಸಹಕರಿಸಿದರು.