
ರೇಷ್ಮೆ ಉತ್ಪಾದನೆಯನ್ನು ಹೆಚ್ಚಿಸಲು ಹಿಪ್ಪು ನೇರಳೆ ತೋಟದಲ್ಲಿ ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ ಎಂದು ಕೇಂದ್ರ ರೇಷ್ಮೆ ಮಂಡಳಿ ವಿಜ್ಞಾನಿ ಎಸ್. ಶಿವಕುಮಾರ್ ತಿಳಿಸಿದ್ದಾರೆ.
ಅರೆಚಾಕನಹಳ್ಳಿ ಗ್ರಾಮದಲ್ಲಿ ನಡೆದ ‘ನಮ್ಮ ರೇಷ್ಮೆ ನಮ್ಮ ಹೆಮ್ಮೆ’ ಕಾರ್ಯಕ್ರಮದಲ್ಲಿ ರೇಷ್ಮೆ ಬೆಳೆ ಪ್ರಾತ್ಯಕ್ಷಿತೆಯನ್ನು ರೈತರಿಗೆ ವಿವರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ರೇಷ್ಮೆ ಉಪನಿರ್ದೇಶಕ ಎಸ್. ಸುಂದರ್ ರಾಜು ಮತ್ತು ವಿವಿಧ ರೇಷ್ಮೆ ಕೃಷಿ ಅಧಿಕಾರಿಗಳು ಭಾಗವಹಿಸಿದ್ದರು.