
ಗದಗ ಶಾಸಕ ಎಚ್.ಕೆ. ಪಾಟೀಲ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಗದಗ-ಬೆಟಗೇರಿ ನಗರಸಭೆಯ 22 ಕಾಂಗ್ರೆಸ್ ಸದಸ್ಯರು ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆ ನೀಡಿದವರಲ್ಲಿ 17 ಮಂದಿ ಚುನಾಯಿತ ಸದಸ್ಯರು ಮತ್ತು ಉಳಿದವರು ನಾಮನಿರ್ದೇಶಿತ ಸದಸ್ಯರಾಗಿದ್ದು, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರಿಗೆ ಪತ್ರ ಹಸ್ತಾಂತರಿಸಿದ್ದಾರೆ.
ಟಿ. ನರಸೀಪುರದಲ್ಲಿ ಎಚ್.ಸಿ. ಮಹದೇವಪ್ಪ ಅವರಿಗೆ ಸ್ಥಾನ ಸಿಗದಿದ್ದಕ್ಕೆ ಅಲ್ಲಿನ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದರೆ, ಬೆಂಗಳೂರಿನಲ್ಲಿ ಎನ್.ಎ. ಹ್ಯಾರಿಸ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.