
ಶಿವಮೊಗ್ಗದ ತಮ್ಮಡಿಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 15 ವರ್ಷದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಜಿ.ಕೆ. ವಿನಯ್ ಚೆಸ್ ಆಟ ನೋಡುತ್ತಿದ್ದಾಗ ದಿಢೀರ್ ಕುಸಿದು ಬಿದ್ದು ಮೃತಪಟ್ಟಿದ್ದಾನೆ.
ವಿಜಯಪುರದಲ್ಲಿ ಶಾಲಾ ವಾಹನದಿಂದ ಇಳಿದ ಅಣ್ಣನನ್ನು ನೋಡಲು ಬಂದ 3 ವರ್ಷದ ಶಿರ್ಷಾ ಸುಹಾಸ ವಾಡಿ, ಚಾಲಕನ ಅಜಾಗರೂಕತೆಯಿಂದ ವಾಹನದ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ವಿನಯ್ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದು, ವಿಜಯಪುರ ಘಟನೆಗೆ ಸಂಬಂಧಿಸಿದಂತೆ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.