
ಎಸ್ಬಿಐ ಬ್ಯಾಂಕ್ ಒಕ್ಕೂಟಕ್ಕೆ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೀಪಕ್ ಕೇಬಲ್ (ಇಂಡಿಯಾ) ಲಿಮಿಟೆಡ್ನ 150 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಕೆ. ವೆಂಕಟೇಶ್ವರ ರಾವ್ ಮತ್ತು ನಿರ್ದೇಶಕಿ ಸತ್ಯವತಿ ಬಾಲ್ ಅವರು ನಕಲಿ ದಾಖಲೆ ಸೃಷ್ಟಿಸಿ ಸಾಲದ ಹಣವನ್ನು ಸಹವರ್ತಿ ಸಂಸ್ಥೆಗಳಿಗೆ ವರ್ಗಾಯಿಸಿರುವುದು ತನಿಖೆಯಲ್ಲಿ ಸಾಬೀತಾಗಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು ಜೂನ್ 02ರಂದು ಕೆ. ವೆಂಕಟೇಶ್ವರ ರಾವ್ ಅವರನ್ನು ಬಂಧಿಸಿದ್ದು, ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.