
ರಾಜ್ಯ ಸರ್ಕಾರ ಮತ್ತು ಬಿಎಂಆರ್ಡಿಎ ಜಂಟಿಯಾಗಿ ಕೈಗೆತ್ತಿಕೊಂಡಿದ್ದ ಬಿಡದಿ ಟೌನ್ಶಿಪ್ ಯೋಜನೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ರೈತರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಪರಿಹಾರದ ಮೊತ್ತ ನಿಗದಿಯಾಗುವವರೆಗೂ ಭೂಸ್ವಾಧೀನ ಪ್ರಕ್ರಿಯೆಯನ್ನು ಮುಂದುವರಿಸದಂತೆ ಕೋರ್ಟ್ ಸರ್ಕಾರಕ್ಕೆ ಸೂಚಿಸಿದ್ದು, ಈ ಪ್ರಕರಣದ ಮುಂದಿನ ವಿಚಾರಣೆ ಈ ಶುಕ್ರವಾರ ನಡೆಯುವ ಸಾಧ್ಯತೆಯಿದೆ.
ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಅವರು, ಸರ್ಕಾರ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಪಕ್ಷೀಯವಾಗಿ ಯೋಜನೆ ಜಾರಿಗೆ ಮುಂದಾಗಿದೆ ಎಂದು ಆರೋಪಿಸಿ, ರೈತರ ಪರವಾಗಿ ಕಾನೂನು ಹೋರಾಟ ಮುಂದುವರಿಸುವುದಾಗಿ ತಿಳಿಸಿದ್ದಾರೆ.