
ಚಿಲ್ಲರೆ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆಯು 60 ರಿಂದ 70 ರೂಪಾಯಿಗೆ ಏರಿಕೆಯಾಗಿದ್ದು, ಮಧ್ಯಮ ವರ್ಗದ ಬಜೆಟ್ ಏರುಪೇರಾಗಿದೆ.
ಮಹಾರಾಷ್ಟ್ರ, ಮಧ್ಯಪ್ರದೇಶ ಹಾಗೂ ಉತ್ತರ ಕರ್ನಾಟಕದಲ್ಲಿ ಸುರಿದ ಅಕಾಲಿಕ ಮಳೆ ಹಾಗೂ ಪ್ರವಾಹದಿಂದ ಬೆಳೆ ನಾಶವಾಗಿರುವುದು ಇದಕ್ಕೆ ಕಾರಣ.
ಹೊಸ ಬೆಳೆ ಮಾರುಕಟ್ಟೆಗೆ ಬರಲು ಇನ್ನೂ 15 ರಿಂದ 20 ದಿನಗಳು ಬೇಕಾಗಬಹುದು ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.