
ಕೇರಳದಲ್ಲಿ ಭಾರಿ ಮಳೆಯಿಂದಾಗಿ 15 ಜನರು ಮೃತಪಟ್ಟಿದ್ದು, 7 ಜನರು ನಾಪತ್ತೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ವಿ. ಡಿ. ಸತೀಶನ್ ತಿಳಿಸಿದ್ದಾರೆ.
ರಾಜ್ಯಾದ್ಯಂತ 316 ಪರಿಹಾರ ಶಿಬಿರಗಳನ್ನು ತೆರೆಯಲಾಗಿದ್ದು, 11,018 ಜನರಿಗೆ ಆಶ್ರಯ ನೀಡಲಾಗಿದೆ; ಮೃತರ ಕುಟುಂಬಕ್ಕೆ ತಲಾ 8 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆಯು ಆಗಸ್ಟ್ 6ರವರೆಗೆ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, ರಕ್ಷಣಾ ಕಾರ್ಯಾಚರಣೆಗೆ 14 ಮೀನುಗಾರಿಕಾ ದೋಣಿಗಳನ್ನು ನಿಯೋಜಿಸಲಾಗಿದೆ.