
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು 100 ದಿನಗಳ ಆಡಳಿತವನ್ನು ಪೂರ್ಣಗೊಳಿಸಿದ್ದು, ಈ ಸಂದರ್ಭದಲ್ಲಿ ದೃಢ ಕರ್ನಾಟಕದ ಸಂಕಲ್ಪ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಚುನಾವಣಾ ಪೂರ್ವದಲ್ಲಿ ನೀಡಿದ್ದ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಸರ್ಕಾರ ಪ್ರತಿವರ್ಷ ಸುಮಾರು 52 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯಿಸುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಮಾಜದ ಅಸಮಾನತೆಯನ್ನು ಹೋಗಲಾಡಿಸಲು ಮತ್ತು ಕಟ್ಟಕಡೆಯ ಜನರಿಗೆ ನ್ಯಾಯ ಒದಗಿಸಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದ್ದು, ಮುಂದಿನ ಒಂದೂವರೆ ವರ್ಷದಲ್ಲಿ ಉಳಿದ ಭರವಸೆಗಳನ್ನು ಈಡೇರಿಸಲಾಗುವುದು ಎಂದು ಅವರು ಹೇಳಿದ್ದಾರೆ.