
ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಪಾರದರ್ಶಕತೆ ತರಲು ಇ-ಪಾವತಿ ಸೌಲಭ್ಯ ಮತ್ತು ಕಡ್ಡಾಯ QR ಕೋಡ್ ರಶೀದಿ ವ್ಯವಸ್ಥೆಯನ್ನು ಅಳವಡಿಸಲು ಹೈಕೋರ್ಟ್ ಆದೇಶಿಸಿದೆ.
ಉಡುಪಿಯ ಮಂದಾರ್ತಿ ದೇವಾಲಯದಲ್ಲಿ ನಕಲಿ ರಶೀದಿ ನೀಡಿ ಹಣ ದುರುಪಯೋಗಪಡಿಸಿಕೊಂಡಿದ್ದ ದ್ವಿತೀಯ ದರ್ಜೆ ಸಹಾಯಕ ರಾಜೇಶ್ ನಾಯಕ್ ವಜಾ ಆದೇಶವನ್ನು ನ್ಯಾಯಾಲಯ ಎತ್ತಿಹಿಡಿದಿದೆ.
ದೇವಾಲಯದ ಹುಂಡಿ ಕಾಣಿಕೆ, ಸೇವಾ ಟಿಕೆಟ್ ಮತ್ತು ಪಾರ್ಕಿಂಗ್ ಶುಲ್ಕ ಸೇರಿದಂತೆ ಪ್ರತಿಯೊಂದು ಆದಾಯಕ್ಕೂ ಡಿಜಿಟಲ್ ವ್ಯವಸ್ಥೆ ಕಲ್ಪಿಸಲು ಧಾರ್ಮಿಕ ದತ್ತಿ ಇಲಾಖೆಗೆ ಸೂಚನೆ ನೀಡಲಾಗಿದೆ.