
2026-27ನೇ ಸಾಲಿನಲ್ಲಿ 9ನೇ ತರಗತಿಗೆ ಆರಂಭವಾಗಿರುವ ಕೃತಕ ಬುದ್ಧಿಮತ್ತೆ (AI) ಆಧಾರಿತ ಶಿಕ್ಷಣವನ್ನು ಮುಂದಿನ ವರ್ಷಗಳಲ್ಲಿ 12ನೇ ತರಗತಿವರೆಗೆ ವಿಸ್ತರಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ 1,000 ಕೆಪಿಎಸ್ ಶಾಲೆಗಳನ್ನು 2,500 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ದ್ವಿತೀಯ ಪಿಯುಸಿವರೆಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ.
ಶಿಕ್ಷಣ ಇಲಾಖೆಯಲ್ಲಿ 15,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಹೆಚ್ಚುವರಿಯಾಗಿ 2,500 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.