
ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 'ಪ್ರಜಾಸೇವೆ ಇಲಾಖೆ'ಯ ವೆಬ್ಸೈಟ್ ಅನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡಿದ್ದಾರೆ.
ಕಾರ್ಯಕ್ರಮದಲ್ಲಿ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳಿಗೆ ಹಕ್ಕು ಪತ್ರಗಳು ಮತ್ತು ಚೆಕ್ಗಳನ್ನು ವಿತರಿಸಿದ ಡಿಕೆಶಿ, ವೇದಿಕೆಯ ಮುಂಭಾಗದಲ್ಲಿ ಕುಳಿತು ಸಾರ್ವಜನಿಕರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಿದರು.
ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಉಪಮುಖ್ಯಮಂತ್ರಿಗಳು, ಸ್ಥಳದಲ್ಲೇ ಪರಿಹಾರ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತು ಸ್ಥಳೀಯ ಶಾಸಕ ಶ್ರೀನಿವಾಸ್ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.