
ಬೆಂಗಳೂರಿನ ಜಿಬಿಎ ಮುಖ್ಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮೂಲ ಮಾಹಿತಿ ಮತ್ತು ಪ್ರಶ್ನೆಗಳಿಗೆ ಉತ್ತರ ಇಲ್ಲದೆ ಬಂದಿದ್ದ ಇಂಜಿನಿಯರ್ಗಳನ್ನು ಸಚಿವ ಕೃಷ್ಣ ಭೈರೇಗೌಡ ತರಾಟೆಗೆ ತೆಗೆದುಕೊಂಡಿದ್ದಾರೆ.
ನಗರದಲ್ಲಿ ಬೀದಿ ದೀಪಗಳನ್ನು ಅಳವಡಿಸದ ಹಿನ್ನೆಲೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರಿ ಕೆಲಸ ಎಂದರೆ ಕೈಬೀಸಿ ಬಂದು ಹೋಗುವುದಲ್ಲ ಎಂದು ಎಚ್ಚರಿಸಿದ ಸಚಿವರು, ತಕ್ಷಣವೇ ಬೀದಿ ದೀಪದ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.