
ರಾಜಾನುಕುಂಟೆ ಪಶು ಆಹಾರ ಘಟಕದಲ್ಲಿ ಕಳಪೆ ಗುಣಮಟ್ಟದ ಕಚ್ಚಾ ವಸ್ತುಗಳ ಬಳಕೆಯಿಂದ ₹4.5 ಕೋಟಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಪಶು ಆಹಾರ ನಿರ್ದೇಶಕ ಜಯಕುಮಾರ್ ಮತ್ತು ಲ್ಯಾಬ್ ಟೆಕ್ನಿಷಿಯನ್ ವೇದಾವತಿ ಅವರ ನಡುವಿನ ಸಂಭಾಷಣೆಯ ಆಡಿಯೋ ವೈರಲ್ ಆಗಿದ್ದು, ಪ್ರಕರಣಕ್ಕೆ ತಿರುವು ಸಿಕ್ಕಿದೆ.
ಕಳಪೆ ಆಹಾರದಿಂದ ಹಸುಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ರೈತರು ದೂರು ನೀಡಿದ್ದು, ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ.