
ಹುಕ್ಕೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಗಸ್ಟ್ 20ರಂದು ಬೆಳಿಗ್ಗೆ 10 ಗಂಟೆಗೆ 'ಶೈಕ್ಷಣಿಕ ಉತ್ತಮತೆಗೆ ಕೃತಕ ಬುದ್ಧಿಮತ್ತೆ ಬಳಕೆ' ಕುರಿತ ಒಂದು ದಿನದ ಕಾರ್ಯಾಗಾರ ನಡೆಯಲಿದೆ.
ಓಮನ್ ನುಲ್ತಾನೇಟ್ ವಿಶ್ವವಿದ್ಯಾಲಯದ ಪ್ರೊ.ಸಮೀವುಲ್ಲಾ ಮನಿಕ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮುಖ್ಯ ಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಪ್ರಕಾಶ ಲಕ್ಷೆಟ್ಟಿ ವಹಿಸಲಿದ್ದು, ನಿವೃತ್ತ ಪ್ರಾಧ್ಯಾಪಕ ಪಿ.ಜಿ.ಕೊಣ್ಣೂರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.