
ಸಂಪುಟದಲ್ಲಿ ಖಾಲಿ ಉಳಿದಿರುವ ಒಂದು ಸಚಿವ ಸ್ಥಾನಕ್ಕಾಗಿ ಗಾಯತ್ರಿ ಶಾಂತೇಗೌಡ, ನಯನಾ ಮೋಟಮ್ಮ, ಉಮಾಶ್ರೀ, ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಅನ್ನಪೂರ್ಣ ತುಕಾರಾಂ ನಡುವೆ ಪೈಪೋಟಿ ಏರ್ಪಟ್ಟಿದೆ.
ಸಚಿವ ಸ್ಥಾನದ ಆಕಾಂಕ್ಷಿಗಳು ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆಯನ್ನು ಮಂಡಿಸಿದ್ದು, ಮಹಿಳಾ ಮೀಸಲಾತಿ ಮತ್ತು ಪಕ್ಷದ ಸೇವೆಗೆ ಅವಕಾಶ ನೀಡುವಂತೆ ಕೋರಿದ್ದಾರೆ.
ಹೈಕಮಾಂಡ್ ಪಟ್ಟಿಯಲ್ಲಿದ್ದ ಗಾಯತ್ರಿ ಶಾಂತೇಗೌಡ ಅವರು ಕೊನೆ ಕ್ಷಣದಲ್ಲಿ ಅವಕಾಶ ವಂಚಿತರಾಗಿದ್ದು, ಇದೀಗ ಪುನಃ ಸಚಿವ ಸ್ಥಾನಕ್ಕಾಗಿ ಪ್ರಯತ್ನ ನಡೆಸುತ್ತಿದ್ದಾರೆ.