
ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಕೆಐಎಡಿಬಿ ಸಂಸ್ಥೆಯು ಭ್ರಷ್ಟಾಚಾರದ ಕೇಂದ್ರವಾಗಿದ್ದು, ಪ್ರಭಾವಿ ವ್ಯಕ್ತಿ ಎಂ. ಮಂಜುನಾಥ್ ಎಂಬುವವರು 17 ಎಕರೆ ಜಮೀನು ಕಬಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ದೇವನಹಳ್ಳಿ ಏರೋಸ್ಪೇಸ್ ಪಾರ್ಕ್ನಲ್ಲಿ 71 ಅರ್ಹ ಎಸ್ಸಿ, ಎಸ್ಟಿ ಅರ್ಜಿದಾರರಿಗೆ ಜಮೀನು ಸಿಗದೆ ಅನ್ಯಾಯವಾಗಿದ್ದು, ಮಂಜುನಾಥ್ ಅವರು ಪತ್ನಿ ಮತ್ತು ಸಂಬಂಧಿಕರ ಹೆಸರಿನಲ್ಲಿ ಕೋಟ್ಯಂತರ ರೂ. ಮೌಲ್ಯದ ಜಮೀನು ಪಡೆದಿದ್ದಾರೆ.
ಈ ಹಗರಣದ ಬಗ್ಗೆ ಹಾಲಿ ನ್ಯಾಯಾಧೀಶರಿಂದ ಅಥವಾ ಸಿಬಿಐ, ಇಡಿ ಮೂಲಕ ತನಿಖೆ ನಡೆಸದಿದ್ದರೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಮೆಟ್ಟಿಲೇರುವುದಾಗಿ ನಾರಾಯಣಸ್ವಾಮಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.