
ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಯಲ್ಲಿ ಟ್ರಿಬ್ಯೂನಲ್ ರಿಫಾರ್ಮ್ಸ್, ಕೇರಳ ಹೆಸರು ಬದಲಾವಣೆ, ಗಣಿ ತಿದ್ದುಪಡಿ ಮತ್ತು ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮದ ತಿದ್ದುಪಡಿ ಮಸೂದೆಗಳನ್ನು ಮಂಡಿಸಲಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇರಳ ರಾಜ್ಯದ ಹೆಸರನ್ನು 'ಕೇರಳಂ' ಎಂದು ಬದಲಾಯಿಸುವ ಮಸೂದೆ ಹಾಗೂ ಎನ್ಸಿಡಿಸಿ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಮಂಡಿಸಲಿದ್ದಾರೆ.
ಸದನದಲ್ಲಿ ಹಣಕಾಸು, ರೈಲ್ವೆ ಮತ್ತು ನಗರ ವ್ಯವಹಾರಗಳ ಸ್ಥಾಯಿ ಸಮಿತಿಗಳು ಡಿಜಿಟಲ್ ಅರ್ಥವ್ಯವಸ್ಥೆ ಹಾಗೂ 2026-27ನೇ ಸಾಲಿನ ಅನುದಾನ ಬೇಡಿಕೆಗಳ ಕುರಿತ ವರದಿಗಳನ್ನು ಸಲ್ಲಿಸಲಿವೆ.