
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಸಿಎಂ ಡಿ. ದೇವರಾಜ ಅರಸು ಅವರ ಜನ್ಮದಿನದ ಅಂಗವಾಗಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಕೆಪಿಸಿಸಿ ಆಯೋಜಿಸಿದ್ದ ಸದ್ಭಾವನಾ ದಿನಾಚರಣೆಯಲ್ಲಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಪಾಲ್ಗೊಂಡಿದ್ದರು.
ಭಾರತವು ತಾಂತ್ರಿಕವಾಗಿ ಬಲಿಷ್ಠವಾಗಲು ರಾಜೀವ್ ಗಾಂಧಿ ಕಾರಣರಾಗಿದ್ದು, ಅವರು ಸಂವಿಧಾನದ 73 ಮತ್ತು 74ನೇ ಕಲಂಗಳಿಗೆ ತಿದ್ದುಪಡಿ ತಂದು ಮಹಿಳೆಯರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಕಲ್ಪಿಸಿದರು ಎಂದು ಪರಮೇಶ್ವರ್ ಸ್ಮರಿಸಿದರು.
ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು 1974ರಲ್ಲಿ ಬೆಂಗಳೂರಿನಲ್ಲಿ ಎಲೆಕ್ಟ್ರಾನಿಕ್ ಸಿಟಿ ನಿರ್ಮಿಸಿ ಯುವಕರಿಗೆ ಭವಿಷ್ಯ ಕಟ್ಟಿಕೊಟ್ಟರು ಮತ್ತು ಉಳುವವನಿಗೆ ಭೂಮಿಯ ಒಡೆತನ ನೀಡಿದರು ಎಂದು ಅವರ ಕೊಡುಗೆಗಳನ್ನು ಶ್ಲಾಘಿಸಿದರು.