
ನಿರ್ದೇಶಕ ಆರ್. ಚಂದ್ರು ಅವರು ಮುಂಬೈನಲ್ಲಿ ಶಿವರಾಜ್ ಕುಮಾರ್ ಅವರ ಹೊಸ ಪ್ಯಾನ್ ಇಂಡಿಯಾ ಸಿನಿಮಾ 'ಒರಿಜಿನಲ್ ಮಾನ್ಸ್ಟರ್' ಅನ್ನು ಅಧಿಕೃತವಾಗಿ ಘೋಷಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮಾಧ್ಯಮದವರು ಕೇಳಿದ 'ಟಾಕ್ಸಿಕ್' ಸಿನಿಮಾಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಶಿವರಾಜ್ ಕುಮಾರ್ ಗಂಭೀರವಾಗಿ ಉತ್ತರಿಸಿದ್ದಾರೆ.
ಹಿಂದಿ ಸೇರಿದಂತೆ ಹಲವು ಭಾಷೆಗಳ ಮಾಧ್ಯಮಗಳ ಸಮ್ಮುಖದಲ್ಲಿ ಈ ಹೊಸ ಚಿತ್ರದ ಘೋಷಣೆ ನಡೆದಿದ್ದು, ಶಿವಣ್ಣ ಅವರ ಮುಂದಿನ ಪ್ರಾಜೆಕ್ಟ್ ಬಗ್ಗೆ ಕುತೂಹಲ ಮೂಡಿದೆ.